ವಚನ ಸರ್ವಜ್ಞ ವಚನಗಳು

 

Vachanas

  • ಶಂಕರದಾಸಿಮಯ್ಯ, ಜೇಡರದಾಸಿಮಯ್ಯ, ಕೊಂಡಗುಳಿ ಕೇಶಿರಾಜ ಮೊದಲಾದವರು ಬಸವಪೂರ್ವಯುಗದ ಶರಣರು. ಇವರಲ್ಲಿ ಚಾಳುಕ್ಯ ಜಯಸಿಂಹನ (1015-1042) ಅರಸಿ ಸುಗ್ಗಲೆಯ ಗುರುವಾದ ಜೇಡರದಾಸಿಮಯ್ಯನ ವಚನಗಳು ಲಭಿಸಿವೆ. 10ನೆಯ ಶತಮಾನದ ಉತ್ತರಾರ್ಧದಲ್ಲಿ ಹುಟ್ಟಿರಬಹುದಾದ ಈತನ ಗುರು ಶಂಕರದಾಸಿಮಯ್ಯನೂ ವಚನಗಳನ್ನು ರಚಿಸಿರಬಹುದು.
  • ಜೇಡರ ದಾಸಿಮಯ್ಯನ ಹದಗೊಂಡ ಶೈಲಿಯೂ, ಈ ಹೇಳಿಕೆಗೆ ಪುಷ್ಟಿ ನೀಡುತ್ತದೆ. ಅದಕ್ಕಾಗಿ ಈ ಸಾಹಿತ್ಯಪ್ರಕಾರದ ಪ್ರಾಚೀನತೆ 10ನೆಯ ಶತಮಾನದಷ್ಟು ಹಿಂದೆ ಸರಿಯಬಹುದಾಗಿದೆ. ಈ ಕಾಲದ ವಚನಗಳು ಅಲ್ಲಲ್ಲಿ ಅಂಶ, ಲಯ ಒಳಪ್ರಾಸ ಯುಕ್ತವಾಗಿದ್ದು ಗಾತ್ರದಲ್ಲಿ ಚಿಕ್ಕವಾಗಿವೆ.